ಮುಂಬೈ (ಪಿಟಿಐ): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ತಳಕು ಹಾಕಿಕೊಂಡಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸ್ನೇಹಿತ ಸಿದ್ಧಾರ್ಥ್ ಪಿಥಾನಿಗೆ ಇಲ್ಲಿನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ಶನಿವಾರ ಮತ್ತೊಮ್ಮೆ ಜಾಮೀನು ನಿರಾಕರಿಸಿತು.
ಸಿದ್ಧಾರ್ಥ್ ಪಿಥಾನಿಯನ್ನು ಹೈದರಾಬಾದ್ನಲ್ಲಿ ಮೇ 28 ರಂದು ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್ಸಿಬಿ) ಬಂದಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ‘ಸುಶಾಂತ್ ಸಾವಿನ ನಂತರ ಹೊರಬಂದ ಡ್ರಗ್ಸ್ ಪ್ರಕರಣದಲ್ಲಿ ಸಿದ್ಧಾರ್ಥ್ ಪಾತ್ರ ಇರುವುದು ತನಿಖೆಯ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಹಾಗಾಗಿ, ಎನ್ಸಿಬಿ ಅವರನ್ನು ಬಂಧಿಸಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.