ಬೆಂಗಳೂರು:ಶ್ರೀಲಂಕಾದಲ್ಲಿ ಉಗ್ರರು ಸಂಘಟಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿಕರ್ನಾಟಕದ ಕೆ.ಜಿ.ಹನುಮಂತರಾಯಪ್ಪ ಹಾಗೂ ಎಂ. ರಂಗಪ್ಪ ಅವರು ಮೃತಪಟ್ಟಿದ್ದಾರೆ ಎಂದು ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಈ ಟ್ವೀಟ್ ಅನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಂಚಿಕೊಂಡಿದ್ದಾರೆ.
ಸರಣಿ ಸ್ಫೋಟದ ವೇಳೆ ಸುಮಾರು 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸದ್ಯತೊಂದರೆಗೊಳಗಾದವರು ನೆರವಿಗಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಸಹಾಯವಾಣಿ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.
‘ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ನಿಮಗೆ ಅಗತ್ಯ ನೆರವು ನೀಡಲಿದೆ. ನಮ್ಮ ಸಹಾಯವಾಣಿ ಸಂಖ್ಯೆಗಳು+94777903082, +94112422788, +94112422789’ ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.