ADVERTISEMENT

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ತುರ್ತು ಆಸ್ಪತ್ರೆಗೆ ದಾಖಲು

ಪಿಟಿಐ
Published 3 ಅಕ್ಟೋಬರ್ 2021, 16:57 IST
Last Updated 3 ಅಕ್ಟೋಬರ್ 2021, 16:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್‌ ಅವರನ್ನು ಲಖನೌನಲ್ಲಿರುವ ಮೇದಾಂತ ಆಸ್ಪತ್ರೆಗೆ ತುರ್ತು ದಾಖಲು ಮಾಡಲಾಗಿದೆ.

ಆಮ್ಲಜನಕ ಪ್ರಮಾಣ ಕುಸಿತ ಮತ್ತು ಉಸಿರಾಟ ಸಮಸ್ಯೆ ಎದುರಾಗಿದ್ದು, ಭಾನುವಾರ ಬೆಳಗ್ಗೆ ಆಯೋಧ್ಯಾ ಜಿಲ್ಲಾ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೋಪಾಲ ದಾಸ್‌ ಅವರ ಒಡನಾಡಿ ಕಮಲ್‌ ನಯನ್‌ ದಾಸ್‌ ತಿಳಿಸಿದ್ದಾರೆ.

ಶೀತ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು, ಅತಿಯಾದ ಮೂತ್ರ ವಿಸರ್ಜನೆ ಸಮಸ್ಯೆಯೂ ಇತ್ತು. ಸ್ವಲ್ಪ ಸಮಯದ ವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ನೋಡಿಕೊಳ್ಳಲಾಯಿತು. ಕೊನೆಗೆ ಅಲ್ಲಿನ ವೈದ್ಯರೇ ಉತ್ತಮ ಚಿಕಿತ್ಸೆಗೆ ಮೇದಾಂತ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದರು ಎಂದು ನಯನ್‌ ದಾಸ್‌ ತಿಳಿಸಿದ್ದಾರೆ.

ADVERTISEMENT

ಮಹಾಂತ ನೃತ್ಯ ಗೋಪಾಲ ದಾಸ್‌ ಅವರನ್ನು ಕಳೆದ ವರ್ಷ ಕೋವಿಡ್‌-19 ಸೋಂಕು ಬಾಧಿಸಿತ್ತು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ದೀರ್ಘವಧಿ ಚಿಕಿತ್ಸೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.