ADVERTISEMENT

ಸಂಧಾನ ಸಮಿತಿಯಿಂದ ಶ್ರೀ ಶ್ರೀ ರವಿಶಂಕರ್ ಕೈಬಿಡಲು ಮನವಿ

ಪಿಟಿಐ
Published 16 ಮಾರ್ಚ್ 2019, 20:07 IST
Last Updated 16 ಮಾರ್ಚ್ 2019, 20:07 IST
ಶ್ರೀ ಶ್ರೀ ರವಿಶಂಕರ್ 
ಶ್ರೀ ಶ್ರೀ ರವಿಶಂಕರ್    

ಮಥುರಾ:ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದದ ಇತ್ಯರ್ಥಕ್ಕೆ ಬಂಧಿಸಿದಂತೆ ಸುಪ್ರೀಂ ಕೋರ್ಟ್‌ ರಚಿಸಿರುವ ಸಂಧಾನ ಸಮಿತಿಯಿಂದಶ್ರೀ ಶ್ರೀ ರವಿಶಂಕರ್ ಅವರನ್ನು ಕೈಬಿಡಬೇಕು ಎಂದು ಧಾರ್ಮಿಕ ಮುಖಂಡ ಅಧೋಕ್ಷಜಾನಂದ ತೀರ್ಥ ಮಹಾರಾಜ್‌ ಶನಿವಾರ ಮನವಿ ಮಾಡಿದ್ದಾರೆ.

‘ಸಂಧಾನ ಸಮಿತಿ ರಚಿಸುವ ಮೂಲಕ ವಿವಾದವನ್ನು ಸೌಹಾರ್ದವಾಗಿ ಪರಿಹರಿಸಬೇಕು ಎಂಬ ಸುಪ್ರೀಂ ಕೋರ್ಟ್‌ ನಿರ್ಧಾರವನ್ನು ಗೌರವಿಸುತ್ತೇನೆ. ಆದರೆ ರವಿಶಂಕರ್ ಅವರನ್ನು ಕೈಬಿಡಬೇಕು. ಏಕೆಂದರೆ ಅವರು ಈ ಹಿಂದೆ ಸಂಧಾನ ಸೂತ್ರದಲ್ಲಿ ಸೋಲು ಕಂಡಿದ್ದಾರೆ. ಆದ್ದರಿಂದ ಎರಡೂ ಕಡೆಯಿಂದ ಅವರನ್ನು ಮತ್ತು ಅವರ ಸಂಧಾನ ಸೂತ್ರವನ್ನು ಗಂಭೀರವಾಗಿ ಪರಿಗಣಿಸಲಾಗದು’ ಎಂದು ಮಹಾರಾಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ರವಿಶಂಕರ್‌ ಅವರ ವಿರುದ್ಧ ನನಗೆ ಯಾವುದೇ ದ್ವೇಷ ಇಲ್ಲ. ತಾಳ್ಮೆ ಹೊಂದಿರುವ ಸಮರ್ಥ ವ್ಯಕ್ತಿ ಮಾತ್ರವೇ ಸಂಧಾನಕ್ಕೆ ಯಶಸ್ಸು ತಂದುಕೊಡಬಲ್ಲರು’ ಎಂದು ಹೇಳಿದ್ದಾರೆ.

ADVERTISEMENT

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಫ್‌.ಎಂ.ಇಬ್ರಾಹಿಂ ಕಲೀಫುಲ್ಲಾ, ಆರ್ಟ್‌ ಆಫ್‌ ಲೀವಿಂಗ್‌ ಫೌಂಡೇಷನ್‌ನ ಶ್ರೀಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಅವರನ್ನೊಳಗೊಂಡ ಸಂಧಾನ ಸಮಿತಿಯನ್ನು ಸುಪ್ರೀಂ ಇತ್ತೀಚೆಗೆ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.