ADVERTISEMENT

ಗುಂಡು ಹಾರಿಸಿದಂಥ ಸದ್ದು: ಶ್ರೀನಗರದಲ್ಲಿ ಶೋಧ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 10:57 IST
Last Updated 16 ಫೆಬ್ರುವರಿ 2023, 10:57 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಖಮರ್ವಾರಿ ಪ್ರದೇಶದಲ್ಲಿ ಗುಂಡು ಹಾರಿಸಿದಂಥ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಸ್ಥಳದಲ್ಲಿ ಪಹರೆ ಮತ್ತು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದರು.

‘ಖಮರ್ವಾರಿ ಪ್ರದೇಶದಲ್ಲಿ ಗುಂಡು ಹಾರಿಸಿದಂಥ ಸದ್ದು ಕೇಳಿತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಮತ್ತು ಯಾರೂ ಗಾಯಗೊಂಡಿಲ್ಲ. ಸ್ಥಳದಲ್ಲಿ ಪಹರೆ ಮತ್ತು ಶೋಧ ಕಾರ್ಯಾಚರಣೆ ಜಾರಿ ಮಾಡಲಾಗಿದೆ’ ಎಂದು ಶ್ರೀನಗರ ಪೊಲಿಸರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT