ನವದೆಹಲಿ:ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ತಂಡ ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷಕ್ಕೆ ನೆರವಾಗಲಿದೆ.
ಎಐಎಡಿಎಂಕೆ ವಿರುದ್ಧ ಚುನಾವಣಾ ಅಖಾಡದಲ್ಲಿ ಸ್ಪರ್ಧಿಸಲು ಡಿಎಂಕೆ ಕಾರ್ಯತಂತ್ರ ರೂಪಿಸಲಿದ್ದು, ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾಸಮಿತಿ ಇದಕ್ಕೆ ಸಹಾಯ ಮಾಡಲಿದೆ.
2021ರ ಚುನಾವಣೆಯಲ್ಲಿ ಸ್ಪರ್ಧಿಸಿ ತಮಿಳುನಾಡಿನ ಗತವೈಭವವನ್ನು ಮರಳಿ ತರುವ ನಮ್ಮ ಯೋಜನೆ ಸಫಲಗೊಳಿಸಲು ಭಾರತೀಯ ರಾಜಕೀಯ ಕಾರ್ಯ ಸಮಿತಿ (ಐ-ಪಿಎಸಿ) ನಮ್ಮೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಸ್ಟಾಲಿನ್ ಭಾನುವಾರ ಟ್ವೀಟಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಐ-ಪಿಎಸಿ, ನಮ್ಮ ತಮಿಳುನಾಡು ತಂಡವು ಮುಂದಿನ ಚುನಾವಣೆಯಲ್ಲಿ ಡಿಎಂಕೆ ಗೆಲುವಿಗೆ ಸಹಕಾರ ನೀಡಲಿದೆ ಎಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.