ADVERTISEMENT

ಕೇಂದ್ರ ಒತ್ತಡ ಹೇರುವಂತಿಲ್ಲ: ಸುರ್ಜೇವಾಲಾ

ಪಿಟಿಐ
Published 19 ಜನವರಿ 2020, 19:52 IST
Last Updated 19 ಜನವರಿ 2020, 19:52 IST

ನವದೆಹಲಿ: ಪೌರತ್ವ (ತಿದ್ದುಪ‍ಡಿ) ಕಾಯ್ದೆಯನ್ನು ವಿರೋಧಿಸುತ್ತಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕಾಯ್ದೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಕಾಯ್ದೆ ವಿರುದ್ಧ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸುಪ್ರೀಂ ಕೋರ್ಟ್‌ನ ಅಂಗಳದಲ್ಲಿವೆ. ಸುಪ್ರೀಂ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಕೇಂದ್ರವು ರಾಜ್ಯಗಳ ಮೇಲೆ ಒತ್ತಡ ಹೇರಬಾರದು ಎಂದು ಕಾಂಗ್ರೆಸ್‌ ವಕ್ತಾರ ರಣ್‌ದೀಪ್‌ ಸುರ್ಜೇವಾಲಾ ಭಾನುವಾರ ಆಗ್ರಹಿಸಿದ್ದಾರೆ.

ಕಾಯ್ದೆಯು ಸಂವಿಧಾನದ ಮೇಲೆ ನಡೆಸಿದ ದಾಳಿಯಾಗಿದೆ. ಇದರ ವಿರುದ್ಧ ದೇಶದ ಜನರು ಬೀದಿಗಿಳಿದಿದ್ದಾರೆ. ಚಳವಳಿ, ಹೋರಾಟಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.

ADVERTISEMENT

ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸಲು ಯಾವ ರಾಜ್ಯವು ಹಿಂದೇಟು ಹಾಕುವಂತಿಲ್ಲ. ಸಂವಿಧಾನ ಬದ್ಧವಾಗಿಯೇ ಸಂಸತ್‌ನಲ್ಲಿ ಅನುಮೋದನೆಗೊಂಡಿದ್ದು, ಅದರ ಜಾರಿಗೆ ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಹೇಳಿಕೆ ಮಹತ್ವ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.