ADVERTISEMENT

ಬೆಂಗಳೂರು ಏರ್‌ಪೋರ್ಟ್‌ನ ಕೆಂಪೇಗೌಡ ಪ್ರತಿಮೆ ವಿನ್ಯಾಸಕಾರ ರಾಮ್ ಸುತಾರ್ ನಿಧನ

ಪಿಟಿಐ
Published 18 ಡಿಸೆಂಬರ್ 2025, 4:50 IST
Last Updated 18 ಡಿಸೆಂಬರ್ 2025, 4:50 IST
<div class="paragraphs"><p>ಶಿಲ್ಪಿ&nbsp;ರಾಮ್ ಸುತಾರ್</p></div>

ಶಿಲ್ಪಿ ರಾಮ್ ಸುತಾರ್

   

ನವದೆಹಲಿ: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ, ಗುಜರಾತ್‌ನಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ಎನ್ನಿಸಿಕೊಂಡಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಯ ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ್ ಸುತಾರ್ ಅವರು ಬುಧವಾರ ನಿಧನರಾದರು. 

ಅವರಿಗೆ 100 ವರ್ಷ ವಯಸ್ಸಾಗಿತ್ತು ಎಂದು ಅವರ ಪುತ್ರ ಅನಿಲ್ ಸುತಾರ್ ತಿಳಿಸಿದ್ದಾರೆ.

ADVERTISEMENT

1925ರ ಫೆ.19ರಂದು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್‌ ಗ್ರಾಮದಲ್ಲಿ ಜನಿಸಿದ್ದ ಸುತಾರ್ ಅವರು ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು.

ದೆಹಲಿಯ ಸಂಸತ್‌ ಭವನದ ಆವರಣದಲ್ಲಿರುವ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿ ಪ್ರತಿಮೆ, ಕುದುರೆ ಸವಾರಿ ಮಾಡುತ್ತಿರುವ ಛತ್ರಪತಿ ಶಿವಾಜಿಯ ಪ್ರತಿಮೆಗಳ ಹಿಂದೆ ಸುತಾರ್ ಅವರ ಕೈಚಳಕವಿದೆ. ಈ ಪ್ರತಿಮೆಗಳು ಕೂಡ ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಸ್ಥಾನ ಪಡೆದಿವೆ.

ಸುತಾರ್ ಅವರಿಗೆ ಕೇಂದ್ರ ಸರ್ಕಾರ 1999 ರಲ್ಲಿ ಪದ್ಮಶ್ರೀ ಮತ್ತು 2016 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತ್ತೀಚೆಗೆ ಮಹಾರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ‘ಮಹಾರಾಷ್ಟ್ರ ಭೂಷಣ್ ಪುರಸ್ಕಾರ’ವನ್ನು ನೀಡಿ ಗೌರವಿಸಲಾಗಿತ್ತು.

ದೇಶದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಗೌರವಿಸುವ ಸಲುವಾಗಿ ಗುಜರಾತ್‌ನಲ್ಲಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.