ADVERTISEMENT

ಭದ್ರಾವತಿ ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಗತಿಯಲ್ಲಿದೆ: HD ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2025, 9:27 IST
Last Updated 3 ಸೆಪ್ಟೆಂಬರ್ 2025, 9:27 IST
   

ಬೆಂಗಳೂರು: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (ವಿಐಎಸ್‌ಎಲ್) ಹಾಗೂ ಸೇಲಂ ಉಕ್ಕು ಸ್ಥಾವರಗಳ ಪುನಶ್ಚೇತನದ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ತ್ವರಿತವಾಗಿ ಸಾಗುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಐಎಸ್‌ಎಲ್ ಮತ್ತು ಸೇಲಂ ಉಕ್ಕು ಸ್ಥಾವರಗಳ ಪುನಶ್ಚೇತನ ಸಂಬಂಧಿಸಿದಂತೆ ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿಐಎಸ್‌ಎಲ್‌ನಲ್ಲಿ ಹಂತ ಹಂತವಾಗಿ ಆಧುನೀಕರಣ, ಫೋರ್ಜಿಂಗ್ ಪ್ರಯೋಗ ಸೇರಿದಂತೆ ಪುನಶ್ಚೇತನ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಕುಮಾರಸ್ವಾಮಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸೇಲಂ ಉಕ್ಕು ಸ್ಥಾವರದಲ್ಲಿ ಜಾಗತಿಕ ಪಾಲುದಾರಿಕೆಯೊಂದಿಗೆ ಖರೀದಿ ಹಾಗೂ ಉತ್ಪಾದನಾ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.