ADVERTISEMENT

ಮೇಜಿನ ಮೇಲಿದ್ದ ಬಾಟಲಿ ನೀರು ಕುಡಿದ ದಲಿತ ವಿದ್ಯಾರ್ಥಿ ಮೇಲೆ ಪ್ರಾಂಶುಪಾಲರ ಹಲ್ಲೆ

ಪಿಟಿಐ
Published 13 ಫೆಬ್ರುವರಿ 2023, 9:48 IST
Last Updated 13 ಫೆಬ್ರುವರಿ 2023, 9:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬಿಜ್ನೋರ್‌ (ಉತ್ತರ ಪ್ರದೇಶ): ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ 11ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ನಡೆದ 12ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ನಡೆದಿರುವುದಾಗಿ ದಲಿತ ವಿದ್ಯಾರ್ಥಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಿಜ್ನೋರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ.

ಬಿಜ್ನೋರ್‌ನ ಶಾಲೆಯೊಂದರ ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದಿದ್ದ. ಅದಕ್ಕೆ ಪ್ರಾಂಶುಪಾಲ ಯೋಗೇಂದ್ರ ಕುಮಾರ್ ಮತ್ತು ಅವರ ಸಹೋದರರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದಾರೆ ಎಂದು ಅರ್ಜ್ ಹೇಳಿದ್ದಾರೆ.

ADVERTISEMENT

ಪ್ರಾಂಶುಪಾಲರು ಸೇರಿದಂತೆ ಏಳು ಮಂದಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.