ADVERTISEMENT

Subhas Chandra Bose Jayanti: ಸ್ವಾತಂತ್ರ್ಯ ಸೇನಾನಿಯ ಪ್ರೇರಣಾತ್ಮಕ ನುಡಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜನವರಿ 2026, 6:33 IST
Last Updated 23 ಜನವರಿ 2026, 6:33 IST
   
ಇಂದು ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರ ಜಯಂತಿ. ಈ ದಿನವನ್ನು (ಜನವರಿ 23) ‘ಪರಾಕ್ರಮ ದಿವಸ್‌’ ಆಗಿ ಆಚರಿಸಲಾಗುತ್ತದೆ.

'ಪರಾಕ್ರಮ ದಿನ'ವನ್ನು ಆಚರಿಸುವುದು ಏಕೆ?

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಬೋಸ್ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲು 2021ರಲ್ಲಿ ಅವರ ಹುಟ್ಟುಹಬ್ಬದ ದಿನವಾದ ಜ.23ರಂದು ಪರಾಕ್ರಮ ದಿನ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿತು. ಈ ದಿನದ ಆಚರಣೆಯ ಮೂಲ ಉದ್ದೇಶ ಸ್ವಾತಂತ್ರ್ಯ ಹೋರಾಟಕ್ಕಾಗಿ ಅವರು ಮಾಡಿದ ತ್ಯಾಗವನ್ನು ಮುಂದಿನ ಪೀಳಿಗೆಯವರಿಗೆ ತಿಳಿಸುವುದಾಗಿದೆ.

ನೇತಾಜಿ ಅವರ ಪ್ರೇರಣಾತ್ಮಕ ನುಡಿಗಳು
  • ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ.

  • ಒಬ್ಬ ವ್ಯಕ್ತಿ ತನ್ನ ಸಿದ್ದಾಂತಕ್ಕಾಗಿ ಸಾಯಬಹುದು, ಆದರೆ ಅವನ ಮರಣದ ನಂತರವೂ ಉಳಿಯುವ ಆ ಸಿದ್ದಾಂತ ಸಾವಿರ ಜನರಲ್ಲಿ ಅವತರಿಸುತ್ತದೆ

    ADVERTISEMENT
  • ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆಯಬೇಕು

  • ಬದುಕಿನಲ್ಲಿ ಯಾವುದೇ ಸವಾಲು, ಹೋರಾಟ ಇಲ್ಲದಿದ್ದರೆ ಜೀವನವು ಅರ್ಧದಷ್ಟು ಆಸಕ್ತಿಯನ್ನು ಕಳೆದುಕೊಳ್ಳುತ್ತದೆ.

  • ಜನ, ಹಣ ಮತ್ತು ವಸ್ತುಗಳಿಂದ ಮಾತ್ರ ಗೆಲುವು ಅಥವಾ ಸ್ವಾತಂತ್ರ್ಯವನ್ನು ಪಡೆಯಲು ಸಾಧ್ಯವಿಲ್ಲ. ವೀರೋಚಿತ ಸಾಧನೆಗಳಿಗೆ ಪ್ರೇರೇಪಿಸುವ ಪ್ರೇರಕ ಶಕ್ತಿಯೂ ನಮ್ಮಲ್ಲಿರಬೇಕು.

  • ಅನ್ಯಾಯವನ್ನು ಸಹಿಸಿಕೊಳ್ಳುವುದು ಹಾಗೂ ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಅತ್ಯಂತ ಘೋರ ಅಪರಾಧ.

  • ಕೇವಲ ಚರ್ಚೆಗಳಿಂದ ಇತಿಹಾಸದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ.

  • ಭಾರತದ ಮೇಲೆ ಇಟ್ಟಿರುವ ನಂಬಿಕೆಯನ್ನು ಯಾವತ್ತೂ ಕಳೆದುಕೊಳ್ಳಬೇಡಿ. ದೇಶವನ್ನು ಬಂಧನದಲ್ಲಿಡುವ ಯಾವ ಶಕ್ತಿಯೂ ಭೂಮಿಯಲ್ಲಿ ಇಲ್ಲ. ಶೀಘ್ರದಲ್ಲೇ ಭಾರತ ಸ್ವತಂತ್ರವಾಗಲಿದೆ.

  • ನಮ್ಮ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ವಾತಂತ್ರ್ಯವೊಂದೇ ಪರಿಹಾರ. ಗುಲಾಮಿತನದ ಸಂಕೋಲೆಯನ್ನು ಕಿತ್ತೆಸೆಯಲು ಒಂದೇ ಹೃದಯ, ಒಂದು ಪ್ರಾಣವಾಗಿ ಎಲ್ಲರೂ ಕಟಿಬದ್ಧರಾಗಬೇಕಾಗಿದೆ.

  • ಯಶಸ್ಸು ಯಾವಾಗಲೂ ವೈಫಲ್ಯದ ಸ್ತಂಭದ ಮೇಲೆ ನಿಂತಿದೆ. ಆದ್ದರಿಂದ ಯಾರೂ ಸೋಲಿಗೆ ಭಯಪಡಬಾರದು.

  • ನಿಮ್ಮ ಸ್ವಂತ ಶಕ್ತಿಯನ್ನು ನಂಬಿ, ಎರವಲು ಪಡೆದ ಶಕ್ತಿ ನಿಮಗೆ ಎಂದಿಗೂ ಮಾರಕ.

  • ಉತ್ಸಾಹ ಇಲ್ಲದೆ ಯಾವ ಮಹತ್ತರ ಕೆಲಸವೂ ನಡೆಯಲ್ಲ.

  • ತಾಯಿಯ ಪ್ರೀತಿ ಅತ್ಯಂತ ಆಳವಾದದ್ದು. ಏಕೆಂದರೆ ಅದರಲ್ಲಿ ಯಾವುದೇ ಸ್ವಾರ್ಥ ಇರುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.