ಬೆಂಗಳೂರು: ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ ಹಲವೆಡೆ ಶುಕ್ರವಾರದ ಪ್ರಾರ್ಥನೆ ಬಳಿಕಪ್ರತಿಭಟನೆಗಳು ನಡೆದಿವೆ. ಇದರ ಬೆನ್ನಲ್ಲೇ. 'ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ' ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
'ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅಪೇಕ್ಷಿಸಿದ್ದೆವು. ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಯಾವುದಾದರೂ ಸುಳಿವು ಇದೆಯೇ? ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಶಾ ಅವರು ಗೃಹ ಸಚಿವರಾಗಿ ಉಳಿಯುತ್ತಾರೆಯೇ? ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಿವಿ ಸಂವಾದವೊಂದರಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರಂಭಗೊಂಡ ಪ್ರತಿರೋಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬೆನ್ನಲ್ಲೇ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಿದೆ. ನೂಪುರ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.