ADVERTISEMENT

ಮಥುರಾ: ಕೃಷ್ಣ ಜನ್ಮಭೂಮಿ ಬಳಿ ಮಸೀದಿ ತೆರವು ಕೋರಿ ಕೋರ್ಟ್‌ಗೆ ಅರ್ಜಿ

ಏಜೆನ್ಸೀಸ್
Published 26 ಸೆಪ್ಟೆಂಬರ್ 2020, 8:47 IST
Last Updated 26 ಸೆಪ್ಟೆಂಬರ್ 2020, 8:47 IST
ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಥುರಾದ ಕೃಷ್ಣ ಜನ್ಮಸ್ಥಾನದಲ್ಲಿರುವ ದೇಗುಲ ಸಿಂಗಾರಗೊಂಡಿರುವುದು – ಪಿಟಿಐ ಸಂಗ್ರಹ ಚಿತ್ರ
ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಥುರಾದ ಕೃಷ್ಣ ಜನ್ಮಸ್ಥಾನದಲ್ಲಿರುವ ದೇಗುಲ ಸಿಂಗಾರಗೊಂಡಿರುವುದು – ಪಿಟಿಐ ಸಂಗ್ರಹ ಚಿತ್ರ   

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದ್ದು. 1968ರ ರಾಜಿ ಪತ್ರವನ್ನು ಒಪ್ಪಲಾಗದು. ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

‘ಭಗವಾನ್ ಕೃಷ್ಣನ ಜನ್ಮಸ್ಥಳವನ್ನು ‘ಕತ್ರಾ ಕೇಶವ್ ದೇವ್’ ಎಂದು ಗುರುತಿಸಲಾಗಿತ್ತು. ಆ ಸ್ಥಳವೀಗ ಈದ್ಗಾ ಮಸೀದಿ ಟ್ರಸ್ಟ್‌ನ ನಿರ್ವಹಣಾ ಸಮಿತಿ ರಚಿಸಿರುವ ಸಂರಚನೆಯ ಕೆಳಗೆ ಇದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

‘ಮಥುರಾದಲ್ಲಿನ ಕೃಷ್ಣ ದೇಗುಲವನ್ನು ಮುಘಲ್ ದೊರೆ ಔರಂಗಜೇಬ್ ಧ್ವಂಸಗೊಳಿಸಿದ್ದ ಎಂಬುದುನ್ನು ಇತಿಹಾಸದಿಂದ ತಿಳಿಯಬಹುದು. ಕೃಷ್ಣ ಜನ್ಮಭೂಮಿಯಲ್ಲಿದ್ದ ದೇಗುಲವೂ ಸೇರಿದಂತೆ ಅನೇಕ ಹಿಂದೂ ದೇಗುಲಗಳನ್ನು ಔರಂಗಜೇಬ್ ಧ್ವಂಸಗೊಳಿಸಿದ್ದ’ ಎಂದೂ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.