ADVERTISEMENT

ಕೇರಳದಲ್ಲಿ ತಾಪಮಾನ ಏರಿಕೆ: ಕಾರ್ಮಿಕರ ಕೆಲಸದ ಅವಧಿಯಲ್ಲಿ ಬದಲಾವಣೆ

ಪಿಟಿಐ
Published 11 ಫೆಬ್ರುವರಿ 2025, 12:42 IST
Last Updated 11 ಫೆಬ್ರುವರಿ 2025, 12:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತಿರುವನಂತಪುರ: ಕೇರಳದಲ್ಲಿ ಹಗಲಿನ ವೇಳೆ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಕಾರ್ಮಿಕರ ಕೆಲಸ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದುಡಿಯುವ ಎಲ್ಲಾ ಕಾರ್ಮಿಕರು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಕಡ್ಡಾಯವಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಲೇಬರ್‌ ಕಮಿಷನರ್‌ ಸಫ್ನಾ ನಾಸಿರುದ್ದೀನ್‌ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪಾಳಿಯಲ್ಲಿ ಕೆಲಸ ಮಾಡುವವರಿಗೆ ಬೆಳಿಗ್ಗೆ ಆರಂಭವಾದ ಕೆಲಸ 12 ಗಂಟೆಗೆ ಕೊನೆಗೊಳ್ಳಬೇಕು. ಮಧ್ಯಾಹ್ನದ ಪಾಳಿ 3 ಗಂಟೆಗೆ ಆರಂಭವಾಗಬೇಕು. ಮುಖ್ಯವಾಗಿ ಕಟ್ಟಡ, ರಸ್ತೆ ನಿರ್ಮಾಣ ಕೆಲಸ ಮಾಡುವವರು ಈ ನಿಯಮ ಪಾಲಿಸಲೇಬೇಕು. ಕಾರ್ಮಿಕರ ಕೆಲಸದ ಅವಧಿಯ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸನ್‌ಸ್ಟ್ರೋಕ್‌ನಂತಹ ಅಪಾಯ ತಪ್ಪಿಸಲು ಮೇ 10ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಸಮುದ್ರ ಮಟ್ಟದಿಂದ 3 ಸಾವಿರ ಅಡಿ ಎತ್ತರದಲ್ಲಿ ವಾಸವಿರುವ ಬಿಸಿಲಿನ ಝಳದಿಂದ ಅಪಾಯ ಎದುರಾಗದಿರುವ ಪ್ರದೇಶದಲ್ಲಿರುವವರಿಗೆ ಈ ನಿಯಮ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.