ADVERTISEMENT

ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 7:20 IST
Last Updated 16 ಜನವರಿ 2019, 7:20 IST
   

ನವದೆಹಲಿ:ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಎಂ.ನಾಗೇಶ್ವರರಾವ್ ಅವರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ. ಈ ಅರ್ಜಿ ವಿಚಾರಣೆ ಮುಂದಿನ ವಾರ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.ಪ್ರಶಾಂತ್ ಭೂಷಣ್ ಅರ್ಜಿದಾರರ ಪರವಾಗಿ ವಾದಿಸಲಿದ್ದಾರೆ. ಶುಕ್ರವಾರ ಈ ಅರ್ಜಿ ಪರಿಗಣಿಸಬೇಕೆಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರೂ, ಅದು ಸಾಧ್ಯವಿಲ್ಲ, ಮುಂದಿನ ವಾರ ಪರಿಗಣಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಎನ್‍ಜಿಒ ಮತ್ತು ಆರ್‌ಟಿಐ ಕಾರ್ಯಕರ್ತೆಯಾಗಿರುವಅಂಜಲಿ ಭಾರದ್ವಾಜ್ ಅವರು ನಾಗೇಶ್ವರ್ ರಾಮ್ ನೇಮಕ ಪ್ರಶ್ನಿಸಿ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.