ADVERTISEMENT

ಕೃಷಿ ಮಸೂದೆಗಳ ವಿರುದ್ಧ ಸುಪ್ರೀಂಗೆ ಮೊರೆ: ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್‌

ಏಜೆನ್ಸೀಸ್
Published 28 ಸೆಪ್ಟೆಂಬರ್ 2020, 10:51 IST
Last Updated 28 ಸೆಪ್ಟೆಂಬರ್ 2020, 10:51 IST
ಧರಣಿ ಕುಳಿತಿರುವ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌
ಧರಣಿ ಕುಳಿತಿರುವ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌   

ಪಂಜಾಬ್‌: ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್‌ ಮುಖ್ಯಮಂತ್ರಿಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸ್ವಾತಂತ್ರ್ಯಹೋರಾಟಗಾರ ಭಗತ್‌ ಸಿಂಗ್‌ ಅವರ ಹುಟ್ಟೂರಾದ ಖಟ್ಕರ್‌ ಕಲಾನ್‌ನಲ್ಲಿ ಧರಣಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಹರಿಹಾಯ್ದಿರುವ ಅವರು, 'ಕೃಷಿ ಮಸೂದೆಗಳನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಲಿದ್ದೇವೆ. ಕೃಷಿ ಎಂಬುದು ರಾಜ್ಯಾಡಳಿತಕ್ಕೆ ಸಂಬಂದಿಸಿದ ವಿಷಯ. ಆದರೆ, ನಮ್ಮನ್ನು ಕೇಳದೆ ಸಂಸತ್‌ನಲ್ಲಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದು ಸಂಪೂರ್ಣವಾಗಿ ಅಸಂವಿಧಾನಿಕ' ಎಂದು ಅಮರಿಂದರ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಜಾಬ್‌ನ ಹೆಚ್ಚಿನ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಸಂಬಂಧಿತ ಕಾನೂನುಗಳು ಅವರನ್ನು ತೀವ್ರ ಸಂಕಷ್ಟಕ್ಕೀಡು ಮಾಡಲಿವೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ಕಳೆದ ಎರಡು ವಾರಗಳಿಂದ ಪಂಜಾಬ್, ಹರಿಯಾಣ, ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.