ADVERTISEMENT

ಕಾವಡ್ ಯಾತ್ರೆ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2021, 12:40 IST
Last Updated 16 ಜುಲೈ 2021, 12:40 IST
ರಥ ಯಾತ್ರೆಗೆ ಅವಕಾಶ ನೀಡಿದ್ದ ಉತ್ತರ ಪ್ರದೇಶ ಸರ್ಕಾರ
ರಥ ಯಾತ್ರೆಗೆ ಅವಕಾಶ ನೀಡಿದ್ದ ಉತ್ತರ ಪ್ರದೇಶ ಸರ್ಕಾರ   

ನವದೆಹಲಿ: ಕಾವಡ್ ಯಾತ್ರೆಗೆ ಅನುಮತಿ ನೀಡಿರುವ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದ್ದು, ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಿ ಎಂದು ಸೂಚಿಸಿದೆ.

ರಥ ಯಾತ್ರೆಯ ನಿರ್ಧಾರವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ. ಇಲ್ಲವಾದರೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ನ್ಯಾಯಾಧೀಶರಾದ ಆರ್. ಎಫ್. ನಾರಿಮನ್ ಅವರು ಅಧ್ಯಕ್ಷತೆ ವಹಿಸಿದ್ದ ಪೀಠ, ಎಲ್ಲ ಜನರ ಧಾರ್ಮಿಕ ಭಾವನೆ ಮತ್ತು ಇತರ ಅಗತ್ಯಗಳ ಹೊರತಾಗಿಯೂ, ಜನರ ಜೀವಿಸುವ ಹಕ್ಕು ಅಮೂಲ್ಯವಾಗಿದೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಜನರನ್ನು ಸೇರಿಸಿ ರಥ ಯಾತ್ರೆ ನಡೆಸುವುದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ADVERTISEMENT

ಸಾಂಕೇತಿಕ ರಥ ಯಾತ್ರೆಗೆ ಅನುಮತಿ ನೀಡಬೇಕು ಎಂದು ಸರ್ಕಾರ ಪರ ಹಿರಿಯ ವಕೀಲ, ಸಿ. ಎಸ್. ವೈದ್ಯನಾಥನ್ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರ ಸೋಮವಾರ ಅಫಿಡವಿಟ್ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.