ADVERTISEMENT

ಕರ್ನಾಟಕ, ಹಿಮಾಚಲ ಪ್ರದೇಶ HCಗೆ ನ್ಯಾಯಮೂರ್ತಿಗಳ ನೇಮಕ: SC ಕೊಲಿಜಿಯಂ ಶಿಫಾರಸು

ಪಿಟಿಐ
Published 16 ಸೆಪ್ಟೆಂಬರ್ 2025, 9:57 IST
Last Updated 16 ಸೆಪ್ಟೆಂಬರ್ 2025, 9:57 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಕರ್ನಾಟಕ, ಹಿಮಾಚಲ ಪ್ರದೇಶ ಹೈಕೋರ್ಟ್‌ಗಳಿಗೆ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ.

ಹಿಮಾಚಲ ಪ್ರದೇಶ ಹೈಕೋರ್ಟ್‌ನ ಇಬ್ಬರು ಹಿರಿಯ ವಕೀಲರಾದ ಜಿಯಾ ಲಾಲ್ ಭಾರದ್ವಾಜ್ ಮತ್ತು ರೋಮೇಶ್ ವರ್ಮಾ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ಕೊಲಿಜಿಯಂ ಅನುಮೋದನೆ ನೀಡಿದೆ.

ಇದೇ ವೇಳೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವಕ್ಕೂ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಸಮ್ಮತಿ ನೀಡಿದೆ.

ADVERTISEMENT

ನ್ಯಾಯಾಂಗ ಅಧಿಕಾರಿಗಳಾದ ಗೀತಾ ಭರತರಾಜ ಶೆಟ್ಟಿ ಕಡಬ, ಮುರಳೀಧರ ಪೈ ಬೊರ್ಕಟ್ಟೆ ಹಾಗೂ ತ್ಯಾಗರಾಜ ನಾರಾಯಣ ಇನವಳ್ಳಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸುವ ಪ್ರಸ್ತಾವಕ್ಕೂ ಕೊಲಿಜಿಯಂ ಅನುಮೋದನೆ ಕೊಟ್ಟಿದೆ.

ತ್ರಿಪುರಾ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ಬಿಸ್ವಜಿತ್ ಪಾಲಿತ್ ಅವರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಲು ಕೊಲಿಜಿಯಂ ಅನುಮೋದನೆ ನೀಡಿದೆ.

ಮದ್ರಾಸ್ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಎನ್.ಸೆಂಥಿಲ್‌ಕುಮಾರ್ ಮತ್ತು ಜಿ. ಅರುಲ್ ಮುರುಗನ್ ಅವರನ್ನು ನ್ಯಾಯಾಲಯದ ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಬೇಕೆಂದು ಕೊಲಿಜಿಯಂ ಶಿಫಾರಸು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.