ADVERTISEMENT

ಸರ್ಕಾರಿ ನಿವಾಸದಲ್ಲಿ ಇರಲು ಮೇ 31ರವರಗೆ ಶರದ್ ಯಾದವ್‌ಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 15:56 IST
Last Updated 31 ಮಾರ್ಚ್ 2022, 15:56 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯಿಂದ ಅನರ್ಹಗೊಂಡಿರುವ ಶರದ್ ಯಾದವ್ ಅವರಿಗೆ ಸರ್ಕಾರಿ ಬಂಗಲೆಯಲ್ಲಿ ಮೇ 31ರವರೆಗೆ ಇರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಶರದ್ ಯಾದವ್ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ಮಾನವೀಯ ನೆಲೆಯಲ್ಲಿ ಮೇ 31ರವರೆಗೆ ಅವಕಾಶ ನೀಡಿಲಾಗಿದೆ. ಮೇ 31ರ ಬಳಿಕ ಬಂಗಲೆ ಖಾಲಿ ಮಾಡುವುದಾಗಿ ಶರದ್ ಯಾದವ್ ಅವರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT