ADVERTISEMENT

ಪ್ರಧಾನಿ ಭದ್ರತಾ ಲೋಪ ಪ್ರಕರಣ: ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತೆ ಬೆದರಿಕೆ ಕರೆ

ಐಎಎನ್ಎಸ್
Published 18 ಜನವರಿ 2022, 2:21 IST
Last Updated 18 ಜನವರಿ 2022, 2:21 IST
 ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾಗಿದ್ದ ಲೋಪ ಪ್ರಕರಣ
ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾಗಿದ್ದ ಲೋಪ ಪ್ರಕರಣ   

ನವದೆಹಲಿ: ಪಂಜಾಬ್ ಭೇಟಿಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾಗಿದ್ದ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ನಡೆಸಬಾರದು ಎಂದು ಸುಪ್ರೀಂ ಕೋರ್ಟ್‌ನ ವಕೀಲ ವಿಷ್ಣು ಜೈನ್ ಅವರಿಗೆ ಬೆದರಿಕೆ ಕರೆ ಬಂದಿದೆ.

ಈ ಮೊದಲು ಜನವರಿ 12ರಂದು ಕೂಡ ವಿಷ್ಣು ಜೈನ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿ ವಾದಿಸಬಾರದು ಮತ್ತು ಕೂಡಲೇ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಬೆದರಿಕೆ ಕರೆ ಬಂದಿತ್ತು.

ಭದ್ರತಾ ಲೋಪ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದ ಸಮಿತಿ ರಚಿಸಲಾಗಿದೆ.

ADVERTISEMENT

ಬೆದರಿಕೆ ಕರೆ ಕುರಿತು ವಕೀಲ ವಿಷ್ಣು ಜೈನ್, ದೆಹಲಿ ಪೊಲೀಸ್ ವಿಶೇಷ ಘಟಕಕ್ಕೆ ಮಾಹಿತಿ ನೀಡಿದ್ದಾರೆ.

ಈ ಮೊದಲು ಬೆದರಿಕೆ ಒಡ್ಡಿದ್ದ ರೀತಿಯಲ್ಲಿಯೇ ಮತ್ತೆ ಕರೆ ಬಂದಿತ್ತು. ಪ್ರಕರಣದ ವಕಾಲತ್ತು ನಡೆಸಬಾರದು ಎಂದು ಕರೆ ಮಾಡಿದವರು ಒತ್ತಾಯಿಸಿದ್ದಾರೆ ಎಂದು ವಿಷ್ಣು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.