ನವದೆಹಲಿ (ಪಿಟಿಐ): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಿಯಂತ್ರಣಕ್ಕೆ ವಿಫಲವಾದ ಹಿನ್ನೆಲೆಯಲ್ಲಿ ಎನ್ಜಿಟಿ ವಿಧಿಸಿರುವ ₹100 ಕೋಟಿ ದಂಡವನ್ನು ಠೇವಣಿ ಇರಿಸುವಂತೆಮೇಘಾಲಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ಪೀಠ, ದಂಡದ ಮೊತ್ತವನ್ನುಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಸಿಬಿಸಿಬಿ) ಜಮಾ ಮಾಡುವಂತೆ ಹೇಳಿದೆ.
ಅಕ್ರಮ ಗಣಿಗಾರಿಕೆ ಮೂಲಕ ಸಂಗ್ರಹಿಸಿರುವ ಕಲ್ಲಿದ್ದಲನ್ನುಕೋಲ್ ಇಂಡಿಯಾ ಲಿಮಿಟೆಡ್ಗೆ (ಸಿಐಎಲ್) ಹಸ್ತಾಂತರಿಸಬೇಕು. ಈ ಕಲಿದ್ದಲನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ರಾಜ್ಯ ಸರ್ಕಾರದಲ್ಲಿ ಠೇವಣಿ ಇರಿಸಬೇಕು ಎಂದು ಕೋರ್ಟ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.