ಸುಪ್ರೀಂ ಕೋರ್ಟ್
ನವದೆಹಲಿ: ಆತ್ಮಹತ್ಯೆ ಮಾಡಿಕೊಂಡ ಟೆಕಿ ಅತುಲ್ ಸುಭಾಷ್ ಅವರ ಮಗುವನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಅತುಲ್ ಅವರ ತಾಯಿಯು ಕೋರಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಸುಭಾಷ್ ಅವರ ತಾಯಿ ಅಂಜು ದೇವಿ ಅವರು ನಾಲ್ಕು ವರ್ಷ ವಯಸ್ಸಿನ ಮೊಮ್ಮಗನನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಕೋರಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
ಜ.7ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಮಗುವಿನ ಪಾಲಿಗೆ ಅರ್ಜಿದಾರರು ಅಪರಿಚಿತರು ಎಂದು ಹೇಳಿ ಮನವಿಯನ್ನು ತಿರಸ್ಕರಿಸಿತ್ತು.
ಅತುಲ್ ಅವರು ಡಿಸೆಂಬರ್ 9ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಮತ್ತು ಆಕೆಯ ಕುಟುಂಬದವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅತುಲ್ ಅವರು ವಿಡಿಯೊದಲ್ಲಿ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.