ADVERTISEMENT

ಅಯೋಧ್ಯೆ ವಿವಾದ: ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಪುನರ್‌ ರಚಿಸಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 14:47 IST
Last Updated 25 ಜನವರಿ 2019, 14:47 IST
   

ನವದೆಹಲಿ:ಅಯೋಧ್ಯೆಯ ರಾಮಜನ್ಮ ಭೂಮಿ–ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆ ನಡೆಸಲು ಐವರು ನ್ಯಾಯಮೂರ್ತಿಗಳಿರುವ ಹೊಸದೊಂದು ಸಾಂವಿಧಾನಿಕ ಪೀಠವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪುನರ್‌ ರಚಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನೂತನ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌.ಎ.ಬಾಬ್ಡೆ, ಡಿ.ವೈ ಚಂದ್ರಾಚೂಡ್‌, ಅಶೋಕ್‌ ಭೂಷಣ್‌, ಎಸ್‌.ಎ. ನಾಜೀರ್‌ ಇದ್ದಾರೆ.

ನ್ಯಾಯಮೂರ್ತಿ ಯು.ಯು.ಲಲಿತ್‌ ಅವರು ವಿಚಾರಣಾ ಪೀಠದಿಂದ ಹಿಂದೆ ಸರಿದ ಬಳಿಕ ಹೊಸ ಪೀಠವನ್ನು ರಚಿಸಲಾಗಿದೆ.ಜನವರಿ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್‌.ವಿ.ರಮಣ ಅವರೂ ಹೊಸಪೀಠದಲ್ಲಿಲ್ಲ.

ಈ ಸಂಬಂಧ ರಾಜಕೀಯ ಪಕ್ಷಗಳಿಗೆ ನೋಟಿಸ್‌ ನೀಡಿರುವ ಸುಪ್ರಿಂ ಕೋರ್ಟ್‌ ರಿಜಿಸ್ಟ್ರಾರ್‌, ‘ವಿವಾದಿತ ಅಯೋಧ್ಯೆಪ್ರಕರಣದ ವಿಚಾರಣೆಯನ್ನು ಸಾಂವಿಧಾನಿಕ ಪೀಠದೆದುರು ಎತ್ತಿಕೊಳ್ಳುವ ಮುನ್ನ,ಜ.29 ರಂದು(ಗುರುವಾರ) ಮುಖ್ಯ ನ್ಯಾಯಮೂರ್ತಿಗಳ ಅಂಗಳಲ್ಲಿ ವಿಚಾರಣೆಗೊಳಪಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.