ADVERTISEMENT

‘ಯಥಾಸ್ಥಿತಿ ಮುಂದುವರಿಸಿ’ ಸುಪ್ರೀಂಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 10:09 IST
Last Updated 12 ಜುಲೈ 2019, 10:09 IST
   

ನವ ದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ಕರ್ನಾಟಕ ಶಾಸಕರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಯಿತು.ಯಥಾಸ್ಥಿತಿ ಕಾಪಾಡಲು ಸೂಚಿಸಿ, ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠಮುಂದೂಡಿತು.

‘ಈ ಪ್ರಕರಣದಲ್ಲಿ ಸಂವಿಧಾನಾತ್ಮಕ ಅಂಶಗಳು ಅಡಕವಾಗಿದ್ದು, ಹೆಚ್ಚಿನ ವಿಚಾರಣೆ ಅಗತ್ಯ’ ಎಂದು ಪೀಠವು ಅಭಿಪ್ರಾಯಪಟ್ಟಿತು. ಶಾಸಕರ ಪರ ಮುಕುಲ್ ರೋಹಟ್ಗಿ, ಸ್ಪೀಕರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ, ಮುಖ್ಯಮಂತ್ರಿ ಪರ ವಕೀಲ ರಾಜೀವ್ಧವನ್ ವಾದ ಮಂಡಿಸಿದರು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ಮಾಡಬೇಡಿ.ಯಥಾಸ್ಥಿತಿ ಕಾಪಾಡಿ ಎಂದು ಸೂಚಿಸಿ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.