ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, #CBITakesOver, 1StepToSSRJustice, #JusticeforSushantSingRajput ಮತ್ತು Finally CBI for SSR ಹ್ಯಾಷ್ಟ್ಯಾಗ್ಗಳು ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿವೆ.
ಸುಶಾಂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಪಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸಲು ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಪ್ರಕಟಿಸಿದೆ.
ಸಿಬಿಐ ತನಿಖೆಗೆ ಆದೇಶಿಸಿರುವ ಸುಪ್ರೀಂ ಆದೇಶದಿಂದಾಗಿ ಬಹುತೇಕ ಜನರು ಖುಷಿಗೊಂಡಿದ್ದು,ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಅವರು, ದೇವರಿಗೆ ಧನ್ಯವಾದಗಳು! ನಮ್ಮ ಪ್ರಾರ್ಥನೆಗೆ ನೀವು ಉತ್ತರಿಸಿದ್ದೀರಿ!! ಆದರೆ ಇದು ಕೇವಲ ಪ್ರಾರಂಭ... ಸತ್ಯದತ್ತ ಮೊದಲ ಹೆಜ್ಜೆ! ಸಿಬಿಐ ಮೇಲೆ ಸಂಪೂರ್ಣ ನಂಬಿಕೆಯಿದೆ ಎಂದು ಟ್ವೀಟಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಲವಾಗಿ ಒತ್ತಾಯಿಸಿದ್ದ ಬಾಲಿವುಡ್ ನಟಿ ಕಂಗನಾ ಕೂಡ ಟ್ವೀಟ್ ಮಾಡಿದ್ದಾರೆ.ಮಾನವೀಯತೆ ಗೆಲ್ಲುತ್ತದೆ, ಪ್ರತಿಯೊಬ್ಬ ಎಸ್ಎಸ್ಆರ್ ಯೋಧರಿಗೆ ಅಭಿನಂದನೆಗಳು, ಮೊದಲ ಬಾರಿಗೆ ನಾನು ಸಾಮೂಹಿಕ ಪ್ರಜ್ಞೆಯಿಂದಾದ ಬಲವಾದ ಪರಿಣಾಮವನ್ನುನಾನು ಅನುಭವಿಸಿದೆ ಎಂದಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡ ಟ್ವೀಟ್ ಮಾಡಿ, ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ. ಸತ್ಯ ಯಾವಾಗಲೂ ಮೇಲುಗೈ ಸಾಧಿಸಲಿ ಎಂದಿದ್ದಾರೆ.
ನಿತಾ ಅಂಬಾನಿ ಎಂಬ ಹೆಸರಿನ ಟ್ವಿಟರ್ ಬಳಕೆದಾರರು, ಅಭಿನಂದನೆಗಳು ಸುಶಾಂತ್ ಸಿಂಗ್ ರಜಪೂತಿಗರೇ. ಎಸ್ಎಸ್ಆರ್ ಕೊಲೆ ಪ್ರಕರಣವನ್ನು ಅಂತಿಮವಾಗಿ ಸಿಬಿಐ ನಿರ್ವಹಿಸುತ್ತದೆ. ಸುಪ್ರೀಂ ಕೋರ್ಟಿನ ತೀರ್ಪು ಮೀಮ್ ಪೊಲೀಸರು ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಬರೆದುಕೊಂಡಿದ್ದಾರೆ.
ನಿತಾ ಅಂಬಾನಿ ಎಂಬ ಹೆಸರಿನ ಟ್ವಿಟರ್ ಬಳಕೆದಾರರು, ಅಭಿನಂದನೆಗಳು ಸುಶಾಂತ್ ಸಿಂಗ್ ರಜಪೂತಿಗರೇ. ಎಸ್ಎಸ್ಆರ್ ಕೊಲೆ ಪ್ರಕರಣವನ್ನು ಅಂತಿಮವಾಗಿ ಸಿಬಿಐ ನಿರ್ವಹಿಸುತ್ತದೆ. ಸುಪ್ರೀಂ ಕೋರ್ಟಿನ ತೀರ್ಪು ಮೀಮ್ ಪೊಲೀಸರು ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಬರೆದುಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ!! ನ್ಯಾಯ ಸಿಗುವವರೆಗೂ ನಾವು ನಿಲ್ಲಿಸುವುದಿಲ್ಲ ಎಂದು ಅಮಿತ್ ಕುಮಾರ್ ಎನ್ನುವವರು ತಿಳಿಸಿದ್ದಾರೆ.
ಟ್ವಿಟರ್ನಲ್ಲಿ ವ್ಯಕ್ತವಾಗಿರುವ ಇನ್ನಿತರೆ ಪ್ರತಿಕ್ರಿಯೆಗಳು ಇಲ್ಲಿವೆ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.