ADVERTISEMENT

ಕುಸ್ತಿಪಟು ಕೊಲೆಗೆ ಸುಶೀಲ್‌ ಪಿತೂರಿಯೇ ಕಾರಣ: ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಪಿಟಿಐ
Published 3 ಆಗಸ್ಟ್ 2021, 6:16 IST
Last Updated 3 ಆಗಸ್ಟ್ 2021, 6:16 IST
ಸುಶೀಲ್‌ ಕುಮಾರ್
ಸುಶೀಲ್‌ ಕುಮಾರ್   

ನವದೆಹಲಿ: ಕಿರಿಯ ಕುಸ್ತಿಪಟುಗಳಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಬಯಸಿದ್ದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌, ನಡೆಸಿದ ಪಿತೂರಿಯಿಂದಾಗಿ ಯುವ ಕುಸ್ತಿಪಟುವಿನ ಕೊಲೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಛತ್ರಸಾಲ್‌ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿ ಪಟು ಸಾಗರ್ ಧನಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅದರಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಸುಶೀಲ್‌ ಕುಮಾರ್‌ ಸೇರಿದಂತೆ 13 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಸುಶೀಲ್‌ ಕುಮಾರ್‌ ಪಿತೂರಿ ನಡೆಸಿದ್ದರು ಎಂಬುದಕ್ಕೆ ಸಾಕಷ್ಟು ಸಾಕ್ಷ್ಯ, ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜಗಳದ ವೇಳೆ ಗಾಯಗೊಂಡ ನಾಲ್ವರು ಸೇರಿದಂತೆ 155 ಸಾಕ್ಷಿಗಳ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.