ADVERTISEMENT

ಅಸ್ಸಾಂನಲ್ಲಿ ಉಲ್ಫಾ ಉಗ್ರರ ಅಟ್ಟಹಾಸ; ಗುಂಡೇಟಿಗೆ ಐವರು ಬಲಿ

ಏಜೆನ್ಸೀಸ್
Published 2 ನವೆಂಬರ್ 2018, 5:59 IST
Last Updated 2 ನವೆಂಬರ್ 2018, 5:59 IST
   

ಗುವಾಹಟಿ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಖೆರೋನಿ ಎಂಬಲ್ಲಿ ಗುರುವಾರ ತಡರಾತ್ರಿ ಶಂಕಿತ ಉಲ್ಫಾ ಉಗ್ರರು ಅಟ್ಟಹಾಸ ಮೆರೆದಿದ್ದು, ಒಂದೇ ಕುಟುಂಬದ ಮೂವರು ಸೇರಿದಂತೆ ಐದು ಮಂದಿಯನ್ನು ಹತ್ಯೆಗೈದಿದ್ದಾರೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯು ಪರೇಶ್ ಬರುಹಾ ನೇತೃತ್ವದಲ್ಲಿ ನಡೆದಿದ್ದು, ಐವರನ್ನು ಲೋಹಿತ್ ನದಿಯ ತೀರದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಬೆಂಗಾಲಿ ಸಮುದಾಯದವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಅರುಣಾಚಲ ಪ್ರದೇಶ ಹಾಗೂ ಅಸ್ಸಾಂನ ಗಡಿಭಾಗದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ.

ADVERTISEMENT

ರಾಜ್ಯದಾದ್ಯಂತ ಪ್ರತಿಭಟನೆ:

‌ಈ ದುಷ್ಕೃತ್ಯವನ್ನು ಖಂಡಿಸಿದ ಪಶ್ಚಿಮ ಬಂಗಾಳದ ಸಂಘಟನೆಗಳು ತಿನ್ಸುಕಿಯಾ ಜಿಲ್ಲೆಯಲ್ಲಿ 12 ಗಂಟೆಗಳ ಬಂದ್‌ಗೆ ಕರೆನೀಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.

ಈ ಅಮಾನವೀಯ ಕೃತ್ಯವನ್ನು ಖಂಡಿಸಿ ಟ್ವೀಟ್ ಮಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಇದೊಂದು ಅವಿವೇಕದ ಹೀನಾ ಕೃತ್ಯ. ಇದರ ಹಿಂದಿರುವ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಸ್ಸಾಂನ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್‌ ಅವರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.