ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಗೆ ಅನುಮಾನಸ್ಪವಾದ ವಸ್ತುವೊಂದು ಪತ್ತೆಯಾಗಿದ್ದು, ಬಳಿಕ ಅದನ್ನು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆಯ ರಸ್ತೆ ತೆರವು ವಿಭಾಗವು ಉತ್ತರ ಕಾಶ್ಮೀರದ ಕ್ರಲಗುಂದ ಪ್ರದೇಶದ ಓಡಿಪುರದ ರಸ್ತೆ ಬದಿಯಲ್ಲಿ ಎರಡು ಸಣ್ಣ ಗ್ಯಾಸ್ ಸಿಲಿಂಡರ್ಗಳನ್ನು ಪತ್ತೆಹಚ್ಚಿದ್ದು, ಅವುಗಳು ಸುಧಾರಿತ ಸ್ಫೋಟಕಗಳಾಗಿರಬಹುದು ಎಂದು ಶಂಕಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ, ಅದನ್ನು ನಾಶಪಡಿಸಲಾಯಿತು. ನಾಶದ ವೇಳೆ ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.