ADVERTISEMENT

ಸುವೇಂದು ಸೇರಿ ಬಿಜೆಪಿ ಶಾಸಕರ ಸಭಾತ್ಯಾಗ: ಶಿಸ್ತಿಲ್ಲ ಎಂದ ಮಮತಾ ಬ್ಯಾನರ್ಜಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2021, 11:12 IST
Last Updated 6 ಜುಲೈ 2021, 11:12 IST
ಸುವೇಂದು ಅಧಿಕಾರಿ (ಪಿಟಿಐ ಚಿತ್ರ)
ಸುವೇಂದು ಅಧಿಕಾರಿ (ಪಿಟಿಐ ಚಿತ್ರ)   

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಮತ್ತು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸೋಲನುಭವಿಸಿರುವ ಬಗ್ಗೆ ಪ್ರಸ್ತಾಪಿಸಲು ನಾನು ಮುಂದಾಗಿದ್ದೆ. ಆದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಲಿಲ್ಲ. ಮತ್ತೆ ನಾನ್ಯಾಕೆ ಇಲ್ಲಿರಬೇಕು ಎಂದು ಸುವೇಂದು ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಈ ಮಧ್ಯೆ, ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದ ಬಿಜೆಪಿ ಶಾಸಕರ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರಿಗೆ ಸೌಜನ್ಯ, ಶಿಸ್ತು ಇಲ್ಲ ಎಂದು ಅವರು ಟೀಕಿಸಿದ್ದಾರೆ.

ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ಬಿಜೆಪಿಯ ಶಾಸಕರು ಅಡ್ಡಿಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.