ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮಿ ಚೈತನ್ಯಾನಂದ ಸರಸ್ವತಿ ಬಂಧನ

ಪಿಟಿಐ
Published 28 ಸೆಪ್ಟೆಂಬರ್ 2025, 4:27 IST
Last Updated 28 ಸೆಪ್ಟೆಂಬರ್ 2025, 4:27 IST
   

ನವದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ರಾದಲ್ಲಿ ಭಾನುವಾರ ಮುಂಜಾನೆ ಖಾಸಗಿ ಹೋಟೆಲ್‌ವೊಂದರಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ಶ್ರೀ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯನ್‌ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆಯೂ ಚೈತನ್ಯಾನಂದ ಸರಸ್ವತಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 

ADVERTISEMENT

ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್‌ ಪಿತೂರಿ ಆರೋ‍ಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿತ್ತು.

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.