ADVERTISEMENT

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ವಪನ್‌ ದಾಸ್‌ಗುಪ್ತ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 8:58 IST
Last Updated 16 ಮಾರ್ಚ್ 2021, 8:58 IST
 ಸ್ವಪನ್‌ ದಾಸ್‌ಗುಪ್ತ
ಸ್ವಪನ್‌ ದಾಸ್‌ಗುಪ್ತ   

ನವದೆಹಲಿ:ಅಂಕಣಕಾರ ಹಾಗೂ ಪತ್ರಕರ್ತ ಸ್ವಪನ್‌ ದಾಸ್‌ಗುಪ್ತ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಂಗಳವಾರ
ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವಪನ್‌ ದಾಸ್‌ಗುಪ್ತ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ವಪನ್‌ ದಾಸ್‌ಗುಪ್ತ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿದ್ದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ರಾಜೀನಾಮೆ ಅಂಗೀಕರವಾಗಲಿದೆ ಎನ್ನಲಾಗಿದೆ.

ADVERTISEMENT

ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿರುವವರು ರಾಜಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವೆ? ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೋಮವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದ್ದರು.ಇದರ ಬೆನ್ನಲ್ಲೇ ದಾಸ್‌ಗುಪ್ತ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.