ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕೊಚ್ಚಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಇಡೀ ದೇಶವೇ ತಿರುಗಿನೋಡುವಂತೆ ಮಾಡಿದ್ದ ಕೇರಳ ಚಿನ್ನ ಸಾಗಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಅದರೆ, ಸ್ವಪ್ನಾ ಸುರೇಶ್ ಭಯೋತ್ಪಾದಕ ಸಂಪರ್ಕಗಳ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಜೈಲುವಾಸ ಮುಂದುವರಿದೆ.
ಕನಿಷ್ಟ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಈ ಅಪರಾಧ ಪ್ರಕರಣದಲ್ಲಿ ಅ.5ರ ವೇಳೆಗೆ ಸ್ವಪ್ನ ಸುರೇಶ್ರನ್ನು 60 ದಿನಗಳಿಗಿಂತಲೂ ಹೆಚ್ಚು ದಿನ ಕಸ್ಟಡಿಯಲ್ಲಿ ಇಡಲಾಗಿತ್ತು. 60 ದಿನಗಳ ಈ ಅವಧಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಆರ್ಪಿಸಿ ಸೆಕ್ಷನ್ 167 (2) ಅಡಿಯಲ್ಲಿ ಸ್ವಪ್ನಾ ಸುರೇಶ್ ಜಾಮೀನು ಪಡೆಯಲು ಅರ್ಹವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿತು.
ಜುಲೈ 5 ರಂದು ದುಬೈನಿಂದ ಬಂದಿದ್ದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಲ್ಲಿ 30 ಕೆಜಿ ಚಿನ್ನವನ್ನು ಗುಪ್ತವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.