ADVERTISEMENT

ಜಲ ವಿವಾದಕ್ಕೆ ಜಂಟಿ ಪರಿಹಾರ: ಶಾ ಸೂಚನೆ

ಪಿಟಿಐ
Published 3 ಸೆಪ್ಟೆಂಬರ್ 2022, 21:47 IST
Last Updated 3 ಸೆಪ್ಟೆಂಬರ್ 2022, 21:47 IST
ಅಮಿತ್ ಶಾ
ಅಮಿತ್ ಶಾ   

ತಿರುವನಂತಪುರ: ನದಿ ನೀರು ಹಂಚಿಕೆ ಸಮಸ್ಯೆಗಳಿಗೆ ಜಂಟಿ ಪರಿಹಾರ ಹುಡುಕುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣದ ರಾಜ್ಯಗಳನ್ನು ಒತ್ತಾಯಿಸಿದ್ದಾರೆ.

ಶನಿವಾರ ನಡೆದ ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಪಾಲ್ಗೊಂಡಿದ್ದ 30 ನೇ ದಕ್ಷಿಣ ವಲಯ ಕೌನ್ಸಿಲ್ ಸಭೆಯಲ್ಲಿ ಅವರು ಮಾತನಾಡಿದರು.

‘ಬಾಕಿ ಇರುವ ಸಮಸ್ಯೆಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪ್ರತಿನಿಧಿಗಳಿಗೆ ಸೂಚಿಸಿದರು’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಜಂಟಿ ಪರಿಹಾರ ಕಂಡುಕೊಳ್ಳುವಂತೆಯೂ ಅವರು ದಕ್ಷಿಣ ವಲಯ ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಿದರು ಎಂದೂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.