ನವದೆಹಲಿ: ವೀಸಾ ನಿಯಮ ಮತ್ತು ಸರ್ಕಾರದ ಕೋವಿಡ್–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಬ್ಲೀಗ್ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಇಂಡೊನೇಷ್ಯಾದ 150 ಪ್ರಜೆಗಳಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶರಾದ ಗುರ್ಮೊಹಿನಾ ಕೌರ್ ಅವರು ಆರೋಪಿಗಳಿಂದ ತಲಾ ₹10 ಸಾವಿರ ವೈಯಕ್ತಿಕ ಬಾಂಡ್ ಬರೆಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.
ಈ ಪ್ರಕರಣದಲ್ಲಿ 35 ವಿವಿಧ ದೇಶಗಳ 682 ವಿದೇಶಿ ಪ್ರಜೆಗಳಿಗೆ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.36 ದೇಶಗಳ 957 ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು 59 ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.