ADVERTISEMENT

ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2019, 19:09 IST
Last Updated 7 ಜನವರಿ 2019, 19:09 IST

ನವದೆಹಲಿ: ಕರ್ನಾಟಕದ ತಳವಾರ ಮತ್ತು ಪರಿವಾರ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌.ಟಿ) ಸೇರಿಸಲು ಕೇಂದ್ರ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದೆ.

ಇದರೊಂದಿಗೆ ಪರಿವಾರ ಮತ್ತು ತಳವಾರ ಸಮುದಾಯದ ವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ADVERTISEMENT

ಮಸೂದೆಗೆ ಸಂಸತ್‌ ಅಂಗೀಕಾರ ದೊರೆತ ನಂತರ ಎರಡೂ ಸಮುದಾಯಗಳ ಸದಸ್ಯರು ರಾಜ್ಯ ಸರ್ಕಾರದಿಂದ ಎಸ್‌.ಟಿ. ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗುತ್ತಾರೆ.

ಈ ಎರಡು ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.