ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ತೃತೀಯ ಲಿಂಗಿಗಳ ಗುಂಪೊಂದು 'ಕೊವಾಯ್ ಟ್ರಾನ್ಸ್ ಕಿಚನ್' ಎಂಬ ಉಪಾಹಾರ ಗೃಹವನ್ನು ತೆರೆದಿದೆ.
ಲಾಕ್ಡೌನ್ ಸಮಯದಲ್ಲಿ ಹಲವಾರು ಕಷ್ಟಗಳನ್ನು ಎದುರಿಸಿರುವ ತೃತೀಯ ಲಿಂಗಿಗಳು ಭಿಕ್ಷಾಟನೆ ನಿಲ್ಲಿಸಿ ಸ್ವಾವಲಂಬಿಗಳಾಗಬೇಕೆನ್ನುವುದು ಇದರ ಹಿಂದಿನ ಉದ್ದೇಶವಾಗಿದೆ.
ಈ ಬಗ್ಗೆ ಮಾತನಾಡಿರುವ ಕೊಯಮತ್ತೂರು ತೃತೀಯ ಲಿಂಗಿಗಳ ಸಂಘದ ಮುಖ್ಯಸ್ಥೆ ಸಂಗೀತಾ ಎಂಬುವವರು, 'ನಾವು ಕೊಯಮತ್ತೂರಿನಲ್ಲೇ ಇನ್ನೊಂದು ಉಪಾಹಾರ ಗೃಹವನ್ನು ತೆರೆಯಲು ಯೋಜಿಸಿದ್ದೇವೆ. ನಮ್ಮ ಸಮುದಾಯದ ಜನರು ಭಿಕ್ಷಾಟನೆಯನ್ನು ನಿಲ್ಲಿಸಿ ಸ್ವಾವಲಂಬಿಗಳಾಗುವುದು ಮುಖ್ಯವಾಗಿದೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.