ಚೆನ್ನೈ: ಖಾಸಗಿ ಕ್ಲಿನಿಕ್ನಲ್ಲಿ ಇಂಜೆಕ್ಷನ್ ಪಡೆದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ 6 ವರ್ಷದಬಾಲಕ ‘ಕವಿ ದೇವನಾಥನ್‘ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕವಿ ದೇವನಾಥನ್ ಜ್ವರದಿಂದ ಬಳಲುತ್ತಿದ್ದರು. ಅವರ ತಂದೆ ಮಹೇಶ್ವರನ್ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ನರ್ಸ್ ಇಂಜೆಕ್ಷನ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿಕವಿ ದೇವನಾಥನ್ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಬಂಧ ಕ್ಲಿನಿಕ್ನ ನರ್ಸ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.