ಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಹರ್ನಿಯ ಚಿಕಿತ್ಸೆಗಾಗಿ ಸೋಮವಾರ ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
66 ವರ್ಷದ ಪಳನಿಸ್ವಾಮಿ ಅವರು ಎಐಎಡಿಎಂಕೆ ಪಕ್ಷದ ಜಂಟಿ ಸಂಚಾಲಕರೂ ಆಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯುವ ಆಶಯದಲ್ಲಿದ್ದಾರೆ. ಏಪ್ರಿಲ್ 6ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.