ADVERTISEMENT

ವಿವಾದಾತ್ಮಕ ಹೇಳಿಕೆ: ತಮಿಳುನಾಡು ರಾಜ್ಯಪಾಲರಿಂದ ಮಾನನಷ್ಟ ಮೊಕದ್ದಮೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜನವರಿ 2023, 7:51 IST
Last Updated 19 ಜನವರಿ 2023, 7:51 IST
ಆರ್.ಎನ್.ರವಿ
ಆರ್.ಎನ್.ರವಿ   

ಚೆನ್ನೈ: ತಮ್ಮ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

‘ವಿಧಾನಸಭೆಯ ಭಾಷಣದಲ್ಲಿ ರಾಜ್ಯಪಾಲರು ಅಂಬೇಡ್ಕರ್‌ ಹೆಸರು ಹೇಳಲು ನಿರಾಕರಿಸಿದರೆ ಅವರ ವಿರುದ್ಧ ತಿರುಗಿ ಬೀಳಲು ನನಗೆ ಹಕ್ಕು ಇಲ್ಲವೇ? ತಮಿಳುನಾಡು ಸರ್ಕಾರ ನೀಡಿದ ಭಾಷಣವನ್ನು ನೀವು ಓದದಿದ್ದರೆ ಕಾಶ್ಮೀರಕ್ಕೆ ಹೋಗಿ. ನಾವು ಅಲ್ಲಿಗೆ ಉಗ್ರರನ್ನು ಕಳಿಸುತ್ತೇವೆ, ಅವರು ನಿಮ್ಮ ಮೇಲೆ ಗುಂಡು ಹಾರಿಸುತ್ತಾರೆ’ ಎಂದು ಶಿವಾಜಿ ಭಾಷಣದಲ್ಲಿ ಹೇಳಿದ್ದರು.

ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ವೈಯಕ್ತಿಕವಾದದ್ದು, ಅದಕ್ಕೂ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ. ನಮ್ಮ ಪಕ್ಷ ರಾಜ್ಯಪಾಲರನ್ನು ಗೌರವಿಸುತ್ತದೆ ಎಂದು ಡಿಎಂಕೆ ಹೇಳಿದೆ.

ADVERTISEMENT

ಶಿವಾಜಿ ಕೃಷ್ಣಮೂರ್ತಿ ಕಾನೂನು ಬಾಹಿರವಾಗಿ ನಡೆದುಕೊಂಡಿರುವುದರಿಂದ ಅವರನ್ನು ಡಿಎಂಕೆ ತಾತ್ಕಾಲಿಕವಾಗಿ ಅಮಾನತು ಮಾಡಿದೆ.

ರಾಜ್ಯಪಾಲರನ್ನು ಗುರಿಯಾಗಿಸಿ ಡಿಎಂಕೆ ಪಕ್ಷದ ಸದಸ್ಯ ಶಿವಾಜಿ ಕೃಷ್ಣಮೂರ್ತಿ ಅವರು ಆಕ್ಷೇಪಾರ್ಹ ಮತ್ತು ಬೆದರಿಕೆಯೊಡ್ಡುವಂಥ ಭಾಷಣ ಮಾಡಿದ್ದರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯದ ರಾಜಭವನ ಮತ್ತು ಬಿಜೆಪಿ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.