ADVERTISEMENT

ವಿಡಿಯೊ | ಕುರ್ಚಿ ತರಲು ವಿಳಂಬ: ಕಾರ್ಯಕರ್ತರ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜನವರಿ 2023, 9:39 IST
Last Updated 24 ಜನವರಿ 2023, 9:39 IST
ಕಾರ್ಯಕರ್ತರ ಮೇಲೆ ತಮಿಳುನಾಡು ಸಚಿವ ಎಸ್.ಎಂ. ನಾಸರ್ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)
ಕಾರ್ಯಕರ್ತರ ಮೇಲೆ ತಮಿಳುನಾಡು ಸಚಿವ ಎಸ್.ಎಂ. ನಾಸರ್ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)   

ಚೆನ್ನೈ: ಕೂರುವುದಕ್ಕೆ ಕುರ್ಚಿ ತರಲು ವಿಳಂಬ ಮಾಡಿದ ಡಿಎಂಕೆ ಪಕ್ಷದ ಕಾರ್ಯಕರ್ತರ ಮೇಲೆ ತಮಿಳುನಾಡು ಸಚಿವ ಎಸ್.ಎಂ. ನಾಸರ್ ಕಲ್ಲು ತೂರಾಟ ನಡೆಸಿದ್ದಾರೆ.

ತಿರುವಳ್ಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಚಿವರ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಳೆದ ವರ್ಷ, ನಾಸರ್ ಅವರು ಕೇಂದ್ರ ಸರ್ಕಾರ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದೆ. ಹಾಗಾಗಿ ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

ADVERTISEMENT

ಹಾಲನ್ನು ಜಿಎಸ್‌ಟಿಯಿಂದ ಹೊರಗಿಡುವ ಬಗ್ಗೆ ಡಿಎಂಕೆ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.