
ಪಿಟಿಐಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಟಿವಿಕೆ ಪಕ್ಷದ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ಗೆ ಕಚ್ಚಿರುವ ಘಟನೆ ಜರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮಪುರಿಯಲ್ಲಿ ಹೊಸದಾಗಿ ಆರಂಭವಾಗಿದ್ದ ಮದ್ಯದ ಅಂಗಡಿಯನ್ನು ಮುಚ್ಚುವಂತೆ ಟಿವಿಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಅವರನ್ನು ತಡೆಯಲೆತ್ತಿಸಿದ ಪೊಲೀಸ್ ಕೈಯನ್ನು ಪ್ರತಿಭಟನಾನಿರತನೊಬ್ಬ ಹಲ್ಲಿನಿಂದ ಕಚ್ಚಿದ್ದಾನೆ ಎಂದು ಹೇಳಿದ್ದಾರೆ.
ಪೊಲೀಸ್ಗೆ ಕಚ್ಚಿದ್ದ ವ್ಯಕ್ತಿಯನ್ನು ಜೆಮಿನಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಟನೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಾಲ್ಕು ಜನ ಪ್ರತಿಭಟನಾನಿರತರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.