ADVERTISEMENT

ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ನವೆಂಬರ್ 2021, 4:46 IST
Last Updated 10 ನವೆಂಬರ್ 2021, 4:46 IST
ಚೆನ್ನೈಯ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಡಕು ಉಂಟಾಯಿತು – ಎಎಫ್‌ಪಿ ಚಿತ್ರ
ಚೆನ್ನೈಯ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಡಕು ಉಂಟಾಯಿತು – ಎಎಫ್‌ಪಿ ಚಿತ್ರ   

ಚೆನ್ನೈ: ತಮಿಳುನಾಡಿನ ಹಲವೆಡೆ ಭಾರಿ ಮಳೆ ಮುಂದುವರಿದಿದೆ. ಕಡಲೂರು, ವಿಲುಪುರಂ, ಶಿವಗಂಗಾ, ರಾಮನಾಥಪುರಂ, ಕರೈಕಲ್‌ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಚೆನ್ನೈ ನಗರದ ಹಲವೆಡೆ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಸಂಚಾರಕ್ಕೆ ತೊಡಕಾಗಿದೆ.

ನಾಗಪಟ್ಟಣಂನಲ್ಲಿ ಭಾರಿ ಮಳೆಯಾಗುತ್ತಿದೆ. ಚೆನ್ನೈ, ಕಂಚೀಪುರಂ, ತಿರುವಳ್ಳೂರ್, ಚೆಂಗಲ್‌ಪಟ್ಟು, ಕಡಲೂರು, ನಾಗಪಟ್ಟಣಂ, ತಾಂಜಾವೂರ್, ತಿರುವಾರೂರ್ ಹಾಗೂ ಮಯಿಲದುತರೈಗಳಲ್ಲಿ ಬಾರಿ ಮಳೆಯ ಕಾರಣ ಎರಡು ದಿನಗಳ ರಜೆ ಘೋಷಿಸಲಾಗಿದೆ.

ADVERTISEMENT

ಕೊಯಮತ್ತೂರಿನಲ್ಲಿಯೂ ಶಾಲೆ–ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.