ಹೈದರಾಬಾದ್:ತೆಲಂಗಾಣದ ನೂತನ ರಾಜ್ಯಪಾಲೆಯಾಗಿ ಡಾ. ತಮಿಳಿಸೈ ಸೌಂದರರಾಜನ್ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ಸೌಂದರರಾಜನ್ ಅವರಿಗೆ ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ ಪ್ರತಿಜ್ಞಾವಿಧಿ ಬೋಧಿಸಿದರು.
ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷೆಯಾಗಿದ್ದ ಅವರನ್ನು ರಾಷ್ಟ್ರಪತಿರಾಮನಾಥ ಕೋವಿಂದ್ಸೆಪ್ಟೆಂಬರ್ 1ರಂದುತೆಲಂಗಾಣದ ರಾಜ್ಯಪಾಲೆಯನ್ನಾಗಿ ಘೋಷಿಸಿದ್ದರು. ಜತೆಗೆಹಿಮಾಚಲ ಪ್ರದೇಶ, ಕೇರಳ,ಮಹಾರಾಷ್ಟ್ರ ಮತ್ತು ರಾಜಸ್ತಾನಕ್ಕೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.