ಹೈದರಾಬಾದ್: ತೆಲುಗುದೇಶಂ (ಟಿಡಿಪಿ) ಪಕ್ಷದ ವಕ್ತಾರ ಬಿ.ಎನ್. ರೆಡ್ಡಿ ಅವರು ಆಡಳಿತಾರೂಢ ಟಿಆರ್ಎಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾಗಿದ್ದಾರೆ. ಟಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಸಮ್ಮುಖದಲ್ಲಿ ಪಕ್ಷ ಸೇರಿದರು.
ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಗೆ ಟಿಡಿಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಅದು ನಿರ್ಧರಿಸಿದೆ. ಕಳೆದ ಐದು ವರ್ಷಗಳಲ್ಲಿಟಿಡಿಪಿ ಮುಖಂಡರುಆಡಳಿತಾರೂಢ ಟಿಆರ್ಎಸ್ಗೆ ದೊಡ್ಡ ಸಂಖ್ಯೆಯಲ್ಲಿ ವಲಸೆ ಹೋಗಿರುವುದು ಪಕ್ಷವನ್ನು ಕುಗ್ಗಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.