ವಾರಾಣಸಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಪುತ್ರ, ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಕಾಶಿಯ ವಿಶ್ವನಾಥ ದೇಗುಲದ ನಿಷೇಧಿತ ವಲಯ ಪ್ರವೇಶಿಸಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೇವಾಲಯದ ಆಡಳಿತವು ತನಿಖೆಗೆ ಆದೇಶಿಸಿದೆ.
ಕಾಶಿ ವಿಶ್ವನಾಥ ದೇಗುಲದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ವಿಶ್ವಭೂಷಣ್ ಮಿಶ್ರಾ ಈ ಬಗ್ಗೆ ಮಾಹಿತಿ ನೀಡಿದ್ದು, ‘ವಿಡಿಯೊ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಈ ವಿಚಾರ ದೇವಾಲಯದ ಆಡಳಿತದ ಗಮನಕ್ಕೆ ಬಂದಿದೆ. ದೇಗುಲದ ಭದ್ರತೆಯ ಹೊಣೆ ಹೊತ್ತಿರುವ ಸಿಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿ, ತನಿಖೆಗೆ ಆದೇಶಿಸಲಾಗಿದೆ. ಜತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇವೆ’ ಎಂದಿದ್ದಾರೆ.
ಜತೆಗೆ ನಿಷೇಧಿತ ವಲಯದಲ್ಲಿ ಮೊಬೈಲ್ ಬಳಕೆಯನ್ನೂ ನಿರ್ಬಂಧಿಸಲಾಗಿದೆ. ಆದಾಗ್ಯೂ ವಿಡಿಯೊ ಚಿತ್ರೀಕರಿಸಲಾಗಿದ್ದು, ಭದ್ರತಾ ಏಜೆನ್ಸಿಗಳಿಗೆ ಹೆಚ್ಚಿನ ನಿಗಾವಹಿಸಲು ಸೂಚಿಸಿರುವುದಾಗಿಯೂ ಮಿಶ್ರಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.