ADVERTISEMENT

ನಿತೀಶ್‌ ಜೀ ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ: ತೇಜಸ್ವಿ

ಏಜೆನ್ಸೀಸ್
Published 27 ಅಕ್ಟೋಬರ್ 2020, 7:23 IST
Last Updated 27 ಅಕ್ಟೋಬರ್ 2020, 7:23 IST
ತೇಜಸ್ವಿ ಯಾದವ್
ತೇಜಸ್ವಿ ಯಾದವ್    

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ ಎಂದು ಆರ್‌ಜೆಡಿ ನಾಯಕ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ನಿತೀಶ್‌ ಕುಮಾರ್‌ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ಅವರು ನನ್ನ ವಿರುದ್ಧ ಏನೇ ಪದಗಳನ್ನು ಬಳಸಿದರೂ ಕೂಡ ನಾನು ಆಶೀರ್ವಾದದಂತೆ ಸ್ವೀಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯೋಗ ಮತ್ತು ಅಭಿವೃದ್ಧಿ ವಿಚಾರಗಳು ಪ್ರಮುಖ ಪಾತ್ರವಹಿಸಿವೆ. ಮತದಾರರು ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕೆಲವು ವ್ಯಕ್ತಿಗಳ ಕೇವಲ ಸ್ವಪ್ರತಿಷ್ಠೆಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದನ್ನು ಕೆಲಸದಲ್ಲಿ ತೋರಿಸುವುದಿಲ್ಲ ಎಂದು ಪರೋಕ್ಷವಾಗಿ ನಿತೀಶ್‌ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್‌ 28, ನವೆಂಬರ್ 3, ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.