ADVERTISEMENT

ದಲಿತ ಮುಖಂಡನ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ತೇಜಸ್ವಿ ಯಾದವ್‌ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2020, 7:22 IST
Last Updated 8 ಅಕ್ಟೋಬರ್ 2020, 7:22 IST
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌   

ಪಟ್ನಾ: ದಲಿತ ಮುಖಂಡನ ಕೊಲೆ ಪ್ರಕರಣದ ಎಫ್‌ಐಆರ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಕ್ಕಾಗಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ತೇಜಸ್ವಿ, 'ನನ್ನನ್ನು ಬಂಧಿಸಿ ಅಥವಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ' ಎಂದು ಒತ್ತಾಯಿಸಿದ್ದಾರೆ.

'ಕೆಲಸದ ಒತ್ತಡದಿಂದ ನಾನು ಈ ಘಟನೆಯ ಬಗ್ಗೆ ತಡವಾಗಿ ತಿಳಿದುಕೊಂಡೆ. ಇದಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ನನ್ನ ಮತ್ತು ಸಹೋದರನ ಹೆಸರನ್ನು ದಾಖಲಿಸಲಾಗಿದೆ. ಆ ನಂತರ ಹಲವು ಮಾಧ್ಯಮಗಳಲ್ಲಿ ಕಥೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಿಮ್ಮ ಪಕ್ಷದ ವಕ್ತಾರರು ಕೀಳು ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೆಲ್ಲದರ ಹೊರತಾಗಿಯೂ ಕಾನೂನು ತ್ವರಿತ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂಬುದಾಗಿ ನಾನು ಭಾವಿಸಿದ್ದೇನೆ' ಎಂದು ತೇಜಸ್ವಿ ಯಾದವ್‌ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಅಕ್ಟೋಬರ್‌ 4ರಂದು ಆರ್‌ಜೆಡಿ ಮಾಜಿ ರಾಜ್ಯ ಕಾರ್ಯದರ್ಶಿ ಹಾಗೂ ದಲಿತ ಮುಖಂಡ ಶಕ್ತಿ ಮಲಿಕ್‌ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ತೇಜಸ್ವಿ ಯಾದವ್ ಮತ್ತು ಅವರ ಸಹೋದರನ ಹೆಸರನ್ನು ದಾಖಲಿಸಲಾಗಿದೆ.

ಬಿಹಾರ ಚುನಾವಣೆಯು ಅ. 28ರಂದು ಮೊದಲ ಹಂತ, ನ.3 ರಂದು ಎರಡನೇ ಹಂತ, ನ.7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.