ಹೈದರಾಬಾದ್: ದೇಶದ ಯಾವುದೇ ಮಸೀದಿಯ ಉತ್ಖನನ ಕಾರ್ಯ ನಡೆಸಿ ನೋಡಿದರೂ ಅಲ್ಲಿ ಶಿವಲಿಂಗ ಪತ್ತೆಯಾಗುತ್ತಿದೆ ಎಂದು ತೆಲಂಗಾಣದ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.
ನಾವು ತೆಲಂಗಾಣದಲ್ಲಿರುವ ಎಲ್ಲ ಮಸೀದಿಗಳ ಉತ್ಖನನ ಕಾರ್ಯ ನಡೆಸುತ್ತೇವೆ ಎಂದು ಓವೈಸಿ ಅವರಿಗೆ ಸವಾಲು ಹಾಕುತ್ತೇನೆ ಎಂದಿದ್ದಾರೆ.
ಮಸೀದಿಯಲ್ಲಿ ಹೆಣ ಸಿಕ್ಕರೆ ಅದು ನಿಮ್ಮದು. ಅದರ ಬದಲು, ಶಿವಲಿಂಗ ಸಿಕ್ಕರೆ ಅದು ನಮ್ಮದು. ನೀವು ಈ ಸವಾಲಿಗೆ ಸಿದ್ಧರಿದ್ದೀರಾ ಎಂದು ಬಂಡಿ ಪ್ರಶ್ನಿಸಿದ್ದಾರೆ.
ರಾಮ ರಾಜ್ಯ ಬಂದರೆ, ನಾವು ಉರ್ದು ಭಾಷೆಯನ್ನು ಸಂಪೂರ್ಣವಾಗಿ ನಿಷೇಧಿಸುತ್ತೇವೆ. ಮದರಸಾಗಳಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ. ಅದರಿಂದಾಗಿ ದೇಶದಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿವೆ ಎಂದು ಬಂಡಿ ಹೇಳಿದ್ದಾರೆ.
ಬಿಜೆಪಿ ನಾಯಕರ ಈ ಹೇಳಿಕೆ ಕುರಿತು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.