ADVERTISEMENT

ತೆಲಂಗಾಣ ಸಿ.ಎಂ ಕೆಸಿಆರ್‌-ಎಚ್‌ಡಿಕೆ ಚರ್ಚೆ ಇಂದು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 18:13 IST
Last Updated 10 ಸೆಪ್ಟೆಂಬರ್ 2022, 18:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೆಲಂಗಾಣ ಪ್ರವಾಸ ಹಮ್ಮಿಕೊಂಡಿದ್ದು, ಮುಖ್ಯ ಮಂತ್ರಿ ಕೆ.ಚಂದ್ರಶೇಖರ್ ರಾವ್ ಅವ ರನ್ನು ಭಾನುವಾರ ಹೈದರಾಬಾದ್‌ನಲ್ಲಿ ಭೇಟಿಯಾಗುವರು.

ಹೈದರಾಬಾದ್‌ನ ಮುಖ್ಯಮಂತ್ರಿ ನಿವಾಸದಲ್ಲಿ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಭೇಟಿ ನಡೆಯಲಿದೆ. ಸೆ.10 ರಂದು ಹೈದರಾಬಾದ್‌ಗೆ ತೆರಳಿದ ಅವರನ್ನು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಬರಮಾಡಿಕೊಂಡರು.

ಸಭೆಯಲ್ಲಿ ಉಭಯ ನಾಯಕರು, ಕರ್ನಾಟಕ, ತೆಲಂಗಾಣ ರಾಜಕೀಯ ಮತ್ತು ರಾಷ್ಟ್ರಮಟ್ಟದ ರಾಜಕಾರಣದ ಕುರಿತು ಚರ್ಚಿಸುವರು. ಈ ಹಿಂದೆ ನಡೆದಿದ್ದ ಮಾತುಕತೆಯಂತೆ ವಿಜಯ ದಶಮಿ ವೇಳೆಗೆ ರಾಷ್ಟ್ರಮಟ್ಟದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಹುಟ್ಟು ಹಾಕುವ ಕುರಿತು ಮಹತ್ವದ ಮಾತುಕತೆ ನಡೆಯಲಿದೆ ಎಂದು ಜೆಡಿಎಸ್‌ ಮೂಲ ಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.