ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಸಂಸದ ಆಗಾ ರುಹುಲ್ಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
–ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವುದರ ವಿರುದ್ಧ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಸಂಸದ ಆಗಾ ರುಹುಲ್ಲಾ ನೇತೃತ್ವದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಮರು ದಿನವೇ ಪಕ್ಷದೊಳಗೆ ಸಂಸದರ ವಿರುದ್ಧ ಅಸಮಾಧಾನ ತೀವ್ರಗೊಂಡಿದೆ.
ಈ ವಿಷಯದ ಬಗ್ಗೆ ಪಕ್ಷದ ತೀರ್ಮಾನ ಟೀಕಿಸುವ ರುಹುಲ್ಲಾ ಅವರ ನಿಲುವನ್ನು ಪ್ರಶ್ನಿಸಿರುವ ಎನ್ಸಿಯ ಹಿರಿಯ ನಾಯಕ ಮತ್ತು ಶಾಸಕ ಸಲ್ಮಾನ್ ಸಾಗರ್ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ.
‘ನೀವು ಯಾರೊಂದಿಗೆ ಕೈಜೋಡಿಸಿದ್ದೀರಿ? ನಮ್ಮ ಒಳ್ಳೆಯ ಕೆಲಸಗಳನ್ನು ಹಾಳುಮಾಡಲು ಅವಕಾಶಕ್ಕಾಗಿ ಎದುರು ನೋಡುವ ನಿಮ್ಮ ಶತ್ರುಗಳೊಂದಿಗೆ ನೀವು ಕುಳಿತ್ತಿದ್ದೀರಲ್ಲಾ?’ ಎಂದು ಸಾಗರ್ ಕಿಡಿಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.